Suddibindu.in
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ(bomb) ಘಟನೆ ಉತ್ತರಕನ್ನಡ ಜಿಲ್ಲೆಯ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ
- ಮರಕ್ಕೆ ಕಾರು ಡಿಕ್ಕಿ,ಯುವಕ ಸ್ಥಳದಲ್ಲೇ ಸಾವು
- ಮೋಡ ಬರುತ್ತಿವೆ… ಮಳೆ ಮಾತ್ರ ಇಲ್ಲ! ಕರ್ನಾಟಕದಲ್ಲಿ ಮಳೆ ಕೊರತೆಗೆ ಕಾರಣ ಏನು..?”
- ರೋಟರಿಯಿಂದ ಹಲಸಿನ ಮೌಲ್ಯವರ್ಧನೆ ತರಬೇತಿ ಕಾರ್ಯಾಗಾರ
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.




