www.suddibindu.in
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕರವಾಗಿ ಸುರಿದ ಮಳೆಯ ಪ್ರಮಾಣ ಶನಿವಾರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕ ಮಂದಿ ತಮ್ಮ ನಿವಾಸಗಳಿಗೆ ವಾಪಸ್ ಆಗಿದ್ದಾರೆ, ಸದ್ಯ ಜಿಲ್ಲೆಯಲ್ಲಿ 8 ಕಾಳಜಿ ಕೇಂದ್ರಗಳಲ್ಲಿ 26 ಮಂದಿ ಆಶ್ರಯ ಪಡೆದಿದ್ದು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಹೊನ್ನಾವರದಲ್ಲಿ 7 ಮತ್ತು ಕುಮಟಾ ದಲ್ಲಿ 1ಸೇರಿದಂತೆ ಒಟ್ಟು 8ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ.
ಇದನ್ನೂ ಓದಿ
- ಇಂದು ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ
- ಅನಂತಕುಮಾರ ಹೆಗಡೆ ಬೆಂಬಲಿಗರಿಂದ ಹೆದ್ದಾರಿಯಲ್ಲೆ ಹಲ್ಲೆ
- ಪೊಲೀಸರ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು : ಎಸ್ಪಿ ಎಂ ನಾರಾಯಣ
ಶನಿವಾರ ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು ಜಿಲ್ಲಾಡಳಿತ ನಿಗಧಿಪಡಿದ ಗರಿಷ್ಠ ಮಟ್ಟಕ್ಕಿಂತ ಕಡಿಮೆಯಿದೆ.ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 3 ಮನೆಗಳಿಗೆ ಭಾಗಶ: ಹಾನಿಯಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ಯಾವುದೇ ತುರ್ತು ಕಾರ್ಯಚರಣೆಗೆ ಸಕಲ ರೀತಿಯಲ್ಲಿ ಈ ತಂಡಗಳು ಸನ್ನದ್ದವಾಗಿವೆ
ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಪ್ರಾರಂಭಿಸಿದ್ದು, ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೆಜ್, ವಾಟ್ಪಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ.
…..