suddibindu.in
ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಶಿರೂರು ಬಳಿ ಗುಡ್ಡಕುಸಿತವಾಗಿರುವ ಸ್ಥಳಕ್ಕೆ ನಾಳೆ ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಲಿದ್ದಾರೆ.
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಆಗಮಿಸಲಿದ್ದು,ಗುಡ್ಡ ಕುಸಿತವಾಗಿರುವ ಸ್ಥಳವೀಕ್ಷಣೆ ಮಾಡಲಿದ್ದು, ನಂತರದಲ್ಲಿ ಅಂಕೋಲಾ ಕಾರವಾರ ಭಾಗದಲ್ಲಿ ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಕ್ಕೂ ಕೂಡ ಸಿಎಂ ಭೇಟಿ ನೀಡಲಿದ್ದಾರಂತೆ. ಇವರ ಜೊತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ,ಆರ್ ವಿ ದೇಶಪಾಂಡೆ, ಶಾಸಕರಾದ ಭೀಮಣ್ಣ ನಾಯ್ಕ ಜೊತೆಗಿರಲಿದ್ದಾರೆ.
ಇದನ್ನೂ ಓದಿ
- ಹೋರಿಗಳ ಕಾಳಗ – ಮನೆಗೆ ಹಾನಿ : ದ್ವಿಚಕ್ರ ವಾಹನ ಜಖಂ
- 300 ಕೋಟಿ ಆಸ್ತಿ ಪ್ರಕರಣ; ಕಾರವಾರದಲ್ಲಿ ಸಿದ್ದೀಕ್ ಮನೆಗೆ ಇಡಿ ದಾಳಿ
- ಸರ್ವೇಶ್ವರ ದೇವಾಲಯದ ಹೆಬ್ಬಾಗಿಲು ಉದ್ಘಾಟಿಸಿದ ರೂಪಾಲಿ ನಾಯ್ಕ
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಸಹ ಶಿರೂರು ಗುಡ್ಡಕುಸಿತ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಲಿದ್ದಾರೆ ಎನ್ನಲಾಗಿದೆ.





