suddibindu.in
ಅಂಕೋಲಾ: ಕಳೆದ ಎಂಟುದಿನಗಳ ಹಿಂದೆ ಶಿರೂರು ಬಳಿ ಗುಡ್ಡಕುಸಿತವಾಗಿ ಹನ್ನೊಂದು ಜನ ಮೃತಪಟ್ಟಿದ್ದು ಇಂದು ಬೆಳಿಗ್ಗೆ ಓರ್ವ ಮಹಿಳೆಯ ಶವ ಗಂಗಾವಳಿ ನದಿಯ ಗಂಗೆಕೋಳ್ಳ ನದಿ ತೀರದಲ್ಲಿ ಪತ್ತೆಯಾಗಿದೆ.
ಶಿರೂರು ಗುಡ್ಡಕುಸಿತದಿಂದ ಗಂಗಾವಳಿ ನದಿಯ ಇನ್ನೊಂದು ಪಕ್ಕದಲ್ಲಿದ್ದ ಉಳುವರೆ ಗ್ರಾಮದ ಸುಮಾರು ಐದಕ್ಕೂ ಹೆಚ್ಚು ಮನೆಗಳು ನೆಲಸಮವಾಗಿ ಸಣ್ಣೀ ಗೌಡ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇನ್ನೂ ಹತ್ತಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ
- ಜ್ಯೋತಿಷಿ ಕಮಲಾಕರ್ ಭಟ್ ಸೇರಿ ಏಳು ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿ ವಜಾ
- ಸಚಿವರ ಪಟ್ಟಿ ಆಯ್ಕೆಗೆ ತೆರೆ : ಉತ್ತರಕನ್ನಡಕ್ಕೆ ಮಂಕಾಳ್ ವೈದ್ಯ ಬಹುತೇಕ ಖಚಿತ
- ಕಾವೇರಿ ವಿಚಾರ : ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್
ನಾಪತ್ತೆಯಾಗಿದ್ದ ಸಣ್ಣೀ ಗೌಡ ಪತ್ತೆಗಾಗಿ ಕಳೆದ ಏಂಟು ದಿನಗಳಿಂದ ನಿರಂತರವಾಗಿ ಕಾರ್ಯಚರಣೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಆಕೆಯ ಶವ ಗಂಗೆಕೋಳ್ಳದ ನದಿ ತೀರದಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಸ್ಥಳೀಯ ಪೊಲೀಸರು,NDRF-SDRF ತಂಡಗಳು ಆಗಮಿಸಿದ್ದು ಮೃತ ದೇಹವನ್ನ ಹೊರ ತೆಗೆಯಲಾಗಿದೆ.




