suddibindu.in
ಅಂಕೋಲಾ : ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13ದಿನಗಳಿಂದ ತೀವ್ರ ಕಾರ್ಯಚರಣೆ ಮಾಡಲಾಗಿದ್ದು, ಇದುವರಗೆ 8ಮಂದಿ ಶವ ಹೊರ ತೆಗೆಯಲಾಗಿದ್ದು, ಇನ್ನೂಳಿದ ಮೂವರಿಗಾಗಿ ನಿರಂತರವಾಗಿ ಶೋಧ ನಡೆಸಿದರು ಇದುವರಗೆ ಪತ್ತೆ ಆಗಿರುವ ಕಾರಣ ಇದೀಗ ತಾತ್ಕಾಲಿಕವಾಗಿ ಕಾರ್ಯಚರಣೆ ಸ್ಥಗಿತ ಮಾಡಲಾಗಿದೆ.
ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ, ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್ಗಾಗಿ ತೀವ್ರ ಶೋಧ ನಡೆಸಲಾಗಿತ್ತು. ನಿನ್ನೆಯಿಂದ ಉಡುಪಿಯ ಪರಿಣಿತ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನ ತಂದು ಗಂಗಾವಳಿ ನದಿಯಲ್ಲಿ ಶೋಧ ನಡೆಸಲಾಗಿತ್ತು. ಆದರೆ ಅದು ಎಷ್ಟೆ ಕಾರ್ಯಚರಣೆ ನಡೆಸಿದರು. ಸಹ ನಾಪತ್ತೆ ಆದವರ ಹಾಗೂ ಲಾರಿ ಪತ್ತೆ ಆಗದೆ ಇರುವ ಕಾರಣ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಣ್ಮೀ ಪ್ರೀಯಾ ತಿಳಿಸಿದ್ದಾರೆ.