suddibindu.in
ಕಾರವಾರ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡಕುಸಿತದಿಂದ ಬಂದ್ ಆಗಿದ್ದ ಹೆದ್ದಾರಿಯಲ್ಲಿ ಇಂದಿನಿಂದ ವಾಹನ ಸಂಚಾರ ಆರಂಭವಾಗಿದೆ.
ಜುಲೈ 16ರಂದು ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡಕುಸಿತ ಉಂಟಾಗಿ ಮಂಗಳೂರು ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಸಂಪೂರ್ಣವಾಗಿದೆ ಬಂದ್ ಮಾಡಲಾಗಿತ್ತು. ಇದೀಗ ಹೆದ್ದಾರಿಯಲ್ಲಿ ಮಣ್ಣು ತೆರವು ಸಂಪೂರ್ಣವಾಗಿರುವ ಹಿನ್ನಲೆಯಲ್ಲಿ ಇಂದಿನಿಂದ ಸಂಚಾರ ಆರಂಭವಾಗಿದೆ.ಇನ್ನೂ ಸಹ ಹೆದ್ದಾರಿಯಲ್ಲಿ ಅಲ್ಲಲ್ಲಿ ಗುಡ್ಡಕುಸಿಯುವ ಆತಂಕ ಇದ್ದು ವಾಹನ ಸವಾರರು ಎಚ್ಚರಿಕೆಯಿಂದ ಸಂಚಾರ ಮಾಡಬೇಕಿದೆ.