suddibindu.in
Sagar: ಸಾಗರ : ಉತ್ತರಕನ್ನಡ ಜಿಲ್ಲೆಯ ಭಟ್ಕಳದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ವಾಯವ್ಯ ಸಾರಿಗೆ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.
ಈ ಬಸ್ ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ಹೊರತ್ತಿತ್ತು.(Bhatkala Bangalore Bus) ಈ ವೇಳೆ ಸಾಗರ ಪಟ್ಟಣಕ್ಕೆ ತಲುಪುತ್ತಿದ್ದಂತೆ ಆಕಸ್ಮಿಕವಾಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಚಾಲಕ ಬಸ್ನಿಲ್ಲಿದ್ದು, ಒಳಗಿದ್ದ ಪ್ರಯಾಣಿಕರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್ನಲ್ಲಿ 12ಮಂದಿ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ
- ಗೋ ಕಳ್ಳತನ ಪ್ರಕರಣ ಬಯಲು: ಭಟ್ಕಳದಲ್ಲಿ ಇಬ್ಬರು ಆರೋಪಿ ಬಂಧನ
- ಗೋ ಕಳ್ಳತನ ಪ್ರಕರಣ ಬಯಲು: ಭಟ್ಕಳದಲ್ಲಿ ಇಬ್ಬರು ಆರೋಪಿ ಬಂಧನ
- ಸಿಎಂ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಗೆ ದಾಖಲು
ಬಸ್ಗೆ ಬೆಂಕಿ ಬಿದ್ದ ಬಗ್ಗೆ ಸುದ್ದಿ ತಿಳಿದ ಸಾಗರದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟ ನೀಡಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ಬಸ್ ಬಹುತೇಕ ಸುಟ್ಟುಹೋಗಿದೆ. ಸಾಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






