suddibindu.in
Sagar: ಸಾಗರ : ಉತ್ತರಕನ್ನಡ ಜಿಲ್ಲೆಯ ಭಟ್ಕಳದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ವಾಯವ್ಯ ಸಾರಿಗೆ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.
ಈ ಬಸ್ ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ಹೊರತ್ತಿತ್ತು.(Bhatkala Bangalore Bus) ಈ ವೇಳೆ ಸಾಗರ ಪಟ್ಟಣಕ್ಕೆ ತಲುಪುತ್ತಿದ್ದಂತೆ ಆಕಸ್ಮಿಕವಾಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಚಾಲಕ ಬಸ್ನಿಲ್ಲಿದ್ದು, ಒಳಗಿದ್ದ ಪ್ರಯಾಣಿಕರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್ನಲ್ಲಿ 12ಮಂದಿ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ
- Gokaran/ಗೋಕರ್ಣ ರಸ್ತೆಯಲ್ಲಿ ಪ್ರವಾಸಿಗರ ವಾಹನದ ಮೇಲೆ ಬಿದ್ದ ಬೃಹತ್ ಮರ : ಪ್ರಾಣಾಪಾಯದಿಂದ ಪಾರು
- ಮದುವೆ ದಿಬ್ಬಣ ಚಿತ್ರೀಕರಣಕ್ಕೆ ಬ್ರೇಕ್ ಹಾಕಿದ ಫೋಟೋಗ್ರಾಫರ್ ಅಸೋಸಿಯೇಷನ್
- ರೂಪಾಲಿ ನಾಯ್ಕ ಈಗ ದ.ಕ ಹಾಗೂ ಶಿವಮೊಗ್ಗ ಉಸ್ತುವಾರಿ
ಬಸ್ಗೆ ಬೆಂಕಿ ಬಿದ್ದ ಬಗ್ಗೆ ಸುದ್ದಿ ತಿಳಿದ ಸಾಗರದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟ ನೀಡಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ಬಸ್ ಬಹುತೇಕ ಸುಟ್ಟುಹೋಗಿದೆ. ಸಾಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




