suddibindu.in
Hassan::ಹಾಸನ :ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿ ರೈಲು ಸಂಚಾರ ಸಂಪೂರ್ಣವಾಗಿ ಬಂದ್ ಆಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಳ್ಳುಪೇಟೆ ಬಳಿ ರೈಲ್ವೆ ಮಾರ್ಗದಲ್ಲಿ ತಡ ರಾತ್ರಿ ಈ ಘಟನೆ ನಡೆದಿದೆ.
ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಕಲ್ಲು,ಮಣ್ಣು ಕುಸಿತವಾಗಿದೆ. ರೈಲ್ವೆ ಮಾರ್ಗದಲ್ಲಿ ಗುಡ್ಡಕುಸಿತ ಉಂಟಾಗಿರುವುದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ ಮಾಡಲಾಗಿದೆ.ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸಬೇಕಾದ ಸಕಲೇಶಪುರ, ಯಡಕುಮಾರಿ, ಶಿರವಾಗಿಲು,ಆಲೂರು ಸೇರಿ ಆರು ಕಡೆಯಲ್ಲ ರೈಲು ನಿಲುಗಡೆ ಮಾಡಲಾಗಿದೆ.
ಇದನ್ನೂ ಓದಿ
- ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
- ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ
ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಡುವಂತಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಯಾವ ಕಡೆ ಸಹ ಹೋಗೊದಕ್ಕೆ ಆಗದೆ ಸಾವಿರಾರು ಪ್ರಯಾಣಿಕರು ಜೈಲಿನಲ್ಲಿ ಕುಳಿತುಕೊಳ್ಳುವಂತಾಗಿದೆ. ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.ಇನ್ನೂ ರೈಲ್ಬೆ ಮಾರ್ಗದಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯಚರಣೆ ಆರಂಭಿಸಲಾಗಿದೆ.




