ಸುದ್ದಿಬಿಂದು ಬ್ಯೂರೋ
ಕಾರವಾರ :
ಕಾರವಾರ -ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಚೈತ್ರಾ ಕೋಠಾರಕರ್ ತೀವ್ರ ಪೈಪೋಟಿ ನಡೆಸಿದ್ದರು. ಆದರೆ ಟಿಕೆಟ್ ಕೈ ತಪ್ಪಿರುವುದರಿಂದ ಅಸಮಧಾನಕ್ಕೆ ಒಳಗಾಗಿರುವ ಅವರು ಈ ಭಾರೀ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಕೈ ಟಿಕೆಟ್ ಮಾಜಿ ಶಾಸಕ ಸತೀಶ ಸೈಲ್ ಅವರಿಗೆ ಘೋಷಣೆ ಆದ ಬಳಿ ಚೈತ್ರಾ ಕೋಠಾರಕರ್ ಜೆಡಿಎಸ್ ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಜೆಡಿಎಸ್ ಕೆಲ ಪ್ರಮುಖರು ಸಹ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಗೆ ಅಷ್ಟೊಂದು ಪ್ರಭಾವ ಇಲ್ಲದೆ ಇರುವ ಕಾರಣ ಚೈತ್ರಾ ಅವರು ಜೆಡಿಎಸ್ ನಿಂದ ಸ್ಪರ್ಧೆ ಮಾಡುವ ವಿಚಾರವನ್ನ ಕೈ ಬಿಟ್ಟಿದ್ದಾರೆ.

ಯಾವ ಪಕ್ಷದಿಂದ ಸ್ಪರ್ಧೆ ಮಾಡ ಬೇಕು ಎನ್ನುವ ಬಗ್ಗೆ ಚೈತ್ರಾ ಅವರು ಕ್ಷೇತ್ರದಲ್ಲಿನ ಹಲವು ಮುಖಂಡನರ ಜೊತೆ ಚರ್ಚೆ ನಡೆಸಿದ್ದರು ಎನ್ನಲಾಗಿದ್ದು, ಬಹುತೇಕ ಮುಖಂಡರು ಪಕ್ಷೇತರವಾಗಿ ಸ್ಪರ್ಧೆ ಮಾಡುವಂತೆ ಚೈತ್ರಾ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ,

ಈ ಬಗ್ಗೆ ಇನ್ನೂ ಎರಡು ಮೂರು ದಿನದಲ್ಲಿ ಚೈತ್ರಾ ಕೋಠಾರಕರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವ ಬಗ್ಗೆ ಖಚಿತ ಪಡಿಸಲಿದ್ದಾರೆ‌. ಒಟ್ಟಾರೆ ಚೈತ್ರಾ ಕೋಠಾರಕರ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆಗಿ ಸ್ಪರ್ಧೆಗೆ ಮುಂದಾಗಿರುವುದು ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಲಿದೆ‌.