suddibindu.in
Karwar ಕಾರವಾರ : ಉತ್ತರಕನ್ನಡ ಜಿಲ್ಲೆಯ ಬಹುತೇಕ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಇಂದು ಕುಮಟಾ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯುವುದಿತ್ತು. ಆದರೆ ಕಾಂಗ್ರೆಸ್ ಸದಸ್ಯೆ ವಿನಯಾ ಜಾರ್ಜ್ ಮೀಸಲಾತಿ ವಿರುದ್ಧ ಕೋರ್ಟ್ ನಿಂದ ತಡೆಯಾಜ್ಞೆ ತಂದ ಕಾರಣ ಆಯ್ಕೆ ಪ್ರಕ್ರಿಯೆ ಸಾಧ್ಯವಾಗಿಲ್ಲ.
ಇದನ್ನೂ ಓದಿ
- ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ : ಕೋಟಿ ನಗದು-ಚಿನ್ನ ಪತ್ತೆ ; Xಖಾತೆಯಲ್ಲಿ ಮಾಹಿತಿ ಬಿಚ್ಚಿಟ್ಟ ED
- ಬಿಜೆಪಿಗೆ ಶಾಸಕರ ಕೊರತೆ ಇಡಿ ದಾಳಿಯಿಂದ ಸೆಳೆಯುವ ಯತ್ನ : ಸಚಿವ ಮಂಕಾಳ್ ವೈದ್ಯ ವ್ಯಂಗ್ಯ
- Cyclone/ವಾಯುಭಾರ ಕುಸಿತ ; ಉತ್ತರ ಕನ್ನಡದಲ್ಲಿ ಭಾರೀ ಗಾಳಿ-ಮಳೆ ಸಾಧ್ಯತೆ
ಬಿಜೆಪಿ ಪಕ್ಷವು ತನ್ನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಅಂತಿಮಗೊಳಿಸಿದ್ದು, ಸುಮತಿ ಭಟ್ ಅಧ್ಯಕ್ಷರಾಗಿ, ಮಹೇಶ ನಾಯ್ಕ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು ಎಂದು ವಿಶ್ವಸನೀಯ ಮೂಲಗಳು ತಿಳಿಸಿತ್ತು. ಆದರೆ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಬಿಜೆಪಿಗರ ಕನಸು ಭಗ್ನಗೊಂಡಂತಾಗಿದೆ.