suddibindu in
Kumta : ಕುಮಟಾ : ಅಂಕೋಲಾ ತಾಲೂಕಿನ ಶಿರೂರು ಗುಡ್ಡಕುಸಿತದ ಆತಂಕ ದೂರವಾಗುವ ಮುನ್ನವೆ ಇದೀಗ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕುರಿಗದ್ದೆಯ ಜನವಸತಿ ಪ್ರದೇಶದ ಸಮೀಪದ ಗುಡ್ಡದಲ್ಲಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.
ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕುರಿಗದ್ದೆ ಗ್ರಾಮದ ಕೃಷ್ಣಪ್ಪ ರಾಮಯ್ಯ ಪಟಗಾರ ಎಂಬುವವರ ಮನೆ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಕಿಲೋಮೀಟರ್ ಆಗುವಷ್ಟು ಜಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಮಿ ಬಾಯ್ ತೆರೆದುಕೊಂಡಿದೆ.ಅಲ್ಲಿನ ಪರಿಸ್ಥಿತಿಯನ್ನ ನೋಡಿದರೆ ಯಾವುದೇ ಕ್ಷಣದಲ್ಲಾದ್ದರು ಸಹ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಮಳೆ ಸಹ ಜೋರಾಗಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ..
ಇದನ್ನೂ ಓದಿ
- ವಿನಾಯಕ (ವಿನು) ನಾಯ್ಕ ಅವರಿಗೆ ‘ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ’ ಪ್ರದಾನ
- ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
ಈಗಾಗಲೇ ಗುಡ್ಡಬಿರುಕು ಬಿಟ್ಟಿರುವ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಸಹ ನಡೆಸಿದ್ದು, ಗುಡ್ಡಕುಸಿಯುವ ಆತಂಕ ಇರುವ ಕಾರಣ ಮನೆಯಲ್ಲಿ ವಾಸ್ತವ್ಯ ಮಾಡದಂತೆ ಸಹ ಸೂಚನೆ ನೀಡಿದ್ದಾರೆ.




