suddibindu in
Kumta : ಕುಮಟಾ : ಅಂಕೋಲಾ ತಾಲೂಕಿನ ಶಿರೂರು ಗುಡ್ಡಕುಸಿತದ ಆತಂಕ ದೂರವಾಗುವ ಮುನ್ನವೆ ಇದೀಗ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕುರಿಗದ್ದೆಯ ಜನವಸತಿ ಪ್ರದೇಶದ ಸಮೀಪದ ಗುಡ್ಡದಲ್ಲಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.
ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕುರಿಗದ್ದೆ ಗ್ರಾಮದ ಕೃಷ್ಣಪ್ಪ ರಾಮಯ್ಯ ಪಟಗಾರ ಎಂಬುವವರ ಮನೆ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಕಿಲೋಮೀಟರ್ ಆಗುವಷ್ಟು ಜಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಮಿ ಬಾಯ್ ತೆರೆದುಕೊಂಡಿದೆ.ಅಲ್ಲಿನ ಪರಿಸ್ಥಿತಿಯನ್ನ ನೋಡಿದರೆ ಯಾವುದೇ ಕ್ಷಣದಲ್ಲಾದ್ದರು ಸಹ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಮಳೆ ಸಹ ಜೋರಾಗಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ..
ಇದನ್ನೂ ಓದಿ
- Kumta Crime News/ಕುಮಟಾದಲ್ಲಿ ಜಮೀನು ವಿವಾದ ಕೊಲೆಯಲ್ಲಿ ಅಂತ್ಯ
- ನಿವೃತ್ತ ಶಿಕ್ಷಕ ಕಡತೋಕಾದ ಶಂಕರ ನಾಯ್ಕ ವಿಧಿವಶ
- ಕುಮಟಾದಲ್ಲಿ ಪುಡಿ ರೌಡಿಯಿಂದ ನಡು ರಸ್ತೆಯಲ್ಲೇ ರಂಪಾಟ-ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ
ಈಗಾಗಲೇ ಗುಡ್ಡಬಿರುಕು ಬಿಟ್ಟಿರುವ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಸಹ ನಡೆಸಿದ್ದು, ಗುಡ್ಡಕುಸಿಯುವ ಆತಂಕ ಇರುವ ಕಾರಣ ಮನೆಯಲ್ಲಿ ವಾಸ್ತವ್ಯ ಮಾಡದಂತೆ ಸಹ ಸೂಚನೆ ನೀಡಿದ್ದಾರೆ.





