ಸುದ್ದಿಬಿಂದು ಬ್ಯೂರೋ ವರದಿ
ಚೆನ್ನಪಟ್ಟಣ:ರಾಜ್ಯದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ನ ಭದ್ರಕೋಟೆಯಾಗಿದ್ದ ಚೆನ್ನಪಟ್ಟಣ ಕೇಂದ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿ ಪಿ ಯೋಗೇಶ್ವರ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನ ಸೋಲಿಸುವ ಮೂಲಕ ಜೆಡಿಎಸ್ನ ಭದ್ರಕೋಟೆಯನ್ನ ಛಿದ್ರ ಮಾಡಿದ್ದಾರೆ.
ಚನ್ನಪ್ಪಟ್ಟಣ ಕ್ಷೇತ್ರದಲ್ಲಿ ಒಟ್ಟು 20ಸುತ್ತಿನಲ್ಲಿ ಮತ ಏಣಿಕೆ ನಡೆಸಿದ್ದು, ಆರಂಭಿಕ ಹಂತದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ಕುಮಾರ ಸ್ವಾಮಿ ಅಲ್ಪ ಮತಗಳ ಅಂತರ ಕಾಯ್ದುಕೊಂಡಿದ್ದರು. ಬಳಿಕ 8ನೇ ಸುತ್ತಿನ ಬಳಿಕ ನಿರಂತವಾಗಿ ಹಿನ್ನಡೆ ಅನುಭವಿಸುತ್ತಾ ಹೋದ ನಿಖಿಲ್ಕುಮಾರ ಸ್ವಾಮಿ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ದ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋತ್ತಿದ್ದು.ಈ ಮೂಲಕ ನಿಖಿಲ್ ಕುಮಾರಸ್ವಾಮಿಗೆ ಮೂರನೇ ಬಾರಿ ಸಹ ಸೋಲಾಗಿದೆ.
ಗಮನಿಸಿ