ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ: ಎರಡನೇ ತರಗತಿ ವಿದ್ಯಾರ್ಥಿನಿ ಓರ್ವಳು ಶಾಲಾ ಶೌಚಾಲಯದಲ್ಲಿ ಮೂತ್ರವಿಸರ್ಜನೆಗೆ ಹೋಗಿದ್ದ ವೇಳೆ ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಸಾನ್ವಿ ಗೌಳಿ (7)ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.ವಿದ್ಯಾರ್ಥಿನಿ ಮೂತ್ರವಿಸರ್ಜನೆಗೆ ತೆರಳಿದ್ದ ವೇಳೆ, ಶೌಚಾಲಯದಲ್ಲಿ ಕೆಳಕ್ಕೆ ಹರಿದು ಬಿದ್ದ ವಿದ್ಯುತ್ ಲೈನ್ ತಗುಲಿ ಮೃತಪಟ್ಟಿದ್ದಾಳೆ. ಶಾಲೆಯ ಬೋರ್ವೇಲ್ ಗಾಗಿ ಅಳವಡಿಸಲಾಗಿದ್ದ ವಿದ್ಯುತ್ ಲೈನ್ ಕೆಳಕ್ಕೆ ಬಿದ್ದಿದರಿಂದ ಅನಾಹುತ ಉಂಟಾಗಿದೆ.ಶಾಲಾ ಶಿಕ್ಷಕರ ಬೇಜವಾಬ್ದಾರಿ ಘಟನೆ ಕಾರಣ ಎಂದು ಸ್ಥಳೀರು ಆರೋಪಿಸಿದ್ದಾರೆ.
ಈ ಕೆಳಗಿನ ಸುದ್ದಿ ಮೇಲೆ ಕ್ಲಿಕ್ ಮಾಡಿ ಇನ್ನಷ್ಟು ಸುದ್ದಿಯನ್ನ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




