ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಕಿರು ಸೇತುವೆಯೊಂದಕ್ಕೆ ಹಗ್ಗಕಟ್ಟಿಕೊಂಡು ಮೇಲಿನಿಂದ ಜಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅವರ್ಸಾದ ಅಜ್ಜಪ್ಪ ಶೇಟವಾಡಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಅವರ್ಸಾ ರಾಜೇಶ ಕೃಷ್ಣ ಗಾಂವಕರ ( 20 ) ಮೃತ ದುರ್ದೈವಿಯಾಗಿದ್ದು ಈತ ಮೂಡಕಟ್ಟಾ – ಹಾರವಾಡ ವ್ಯಾಪ್ತಿಯ ಕಿರು ಸೇತುವೆಗೆ ಹಗ್ಗ ಕಟ್ಟಿ ,ಕುತ್ತಿಗೆಗೆ ನೇಣು ಬಿಗಿದುಕೊಂಡು ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಕೇಳಿ ಬಂದಿದೆ. ಬೆಳಿಗ್ಗೆ ಅದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಸುದ್ದಿ ತಲುಪಿಸಿದ್ದಾರೆ.
ಸಿಪಿಐ ಚಂದ್ರಶೇಖರ ಮಠಪತಿ , ಪಿ ಎಸ್ ಐ ಸುನೀಲ್ ಹುಲ್ಗೊಳ್ಳಿ ಮತ್ತು ಸಿಬ್ಬಂದಿಗಳು ಸ್ಥಳ ಪರಿಶೀಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ನಾಯ್ಕ ಹಾಗೂ ಸ್ಥಳೀಯರು ಸಹಕರಿಸಿದರು. ಮೃತ ಯುವಕ ವಿಪರೀತ ಸರಾಯಿ ಕುಡಿತದ ಚಟ ಹೊಂದಿದ್ದ ಎಂದು ಕೆಲ ಸ್ಥಳೀಯರು ಮಾತನಾಡಿಕೊಂಡಂತಿದ್ದು , ಆತ್ಮಹತ್ಯೆಗೆ ನಿಖರ ಕಾರಣಗಳೇನಿರಬಹುದು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಗಮನಿಸಿ.
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




