ಸುದ್ದಿಬಿಂದು ಬ್ಯೂರೋ ವರದಿ
ಮುರುಡೇಶ್ವರ:(Murudeshwar) ಕೋಲಾರ(kolara district) ಮುಳಬಾಗಿಲು(Mulabadigilu) ತಾಲೂಕಿನ ಮೂರಾರ್ಜಿ ದೇಸಾಯಿ ಶಾಲೆಯಿಂದ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ವೇಳೆ ಸಮುದ್ರದ ಅಲೆಯಲ್ಲಿ ಸಿಲುಕಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಇಂದು ಪತ್ತೆಯಾಗಿದೆ. ಇನ್ನೂ ಸ್ಥಳಕ್ಕೆ ಆಗಮಿಸಿ ಮುಳಬಾಗಿಲು ಶಾಸಕ ಇನ್ನೂಳಿದ ವಿದ್ಯಾರ್ಥಿಗಳನ್ನ ತಬ್ಬಿಕೊಂಡು ಒಂದು ಕ್ಷಣ ಕಣ್ಣೀರು ಹಾಕಿದ್ದರು.
ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಮೂರಾರ್ಜಿ ವಸತಿ ಶಾಲೆಯ 54ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದು, ಸಮುದ್ರದಲ್ಲಿ ಆಟ ಆಡುವ ವೇಳೆ ಲಾವಣ್ಯ,ದೀಕ್ಷಾ, ವಂದನಾ, ಶ್ರಾವಂತಿಕ ಎಂಬ ಈ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿದ್ದರು ಅದರಲ್ಲಿ ಶ್ರಾವಂತಿಕ ಎಂಬ ವಿದ್ಯಾರ್ಥಿನಿಯ ಶವ ನಿನ್ನೆಯೇ ಪತ್ತೆಯಾಗಿದ್ದು, ಇನ್ನೂಳಿದ ಮೂವರಿಗೆ ನಡೆದ ಶೋಧಕಾರ್ಯದಲ್ಲಿ ಮೂವರಾದ ಲಾವಣ್ಯ,ದೀಕ್ಷಾ, ವಂದನಾ ಎಂಬುವವರ ಶವ ಇಂದು ಪತ್ತೆಯಾಗಿದೆ.
ಅತ್ತ ತಮ್ಮ ಮಕ್ಕಳು ನಾಪತ್ತೆಯಾಗಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಪಾಲಕರು ಮುರುಡೇಶ್ವರಕ್ಕೆ ಆಗಮಿಸಿದ್ದು ನಾಲ್ವರು ವಿಧ್ಯಾರ್ಥಿನಿಯರ ಪಾಲಕರ ಆಕ್ರಂದನ ಮುಗಿಲುಮುಟ್ಟಿದೆ, ಇನ್ನು ಮೂವರು ವಿಧ್ಯಾರ್ಥಿನಿಯರನ್ನ ರಕ್ಷಣೆ ಮಾಡಲಾಗಿದೆ, ರಕ್ಷಣೆಗೊಳಗಾದ ವಿಧ್ಯಾರ್ಥಿನಿಯರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ….
ಬೆಳಗಾವಿ ಅಧಿವೇಶನದಲ್ಲಿದ್ದ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಮುಳಬಾಗಿಲು ಕ್ಷೇತ್ರದ ಶಾಸಕ ಸಮೃದ್ದಿ ಮಂಜು ಮುರುಡೇಶ್ವರಕ್ಕೆ ಆಗಮಿಸಿದ್ದು, 54ವಿಧ್ಯಾರ್ಥಿಗಳಿಗೆ ಸಚಿವ ಮಂಕಾಳ ವೈದ್ಯ ಜಿಲ್ಲಾಡಳಿತದ ಮೂಲಕ ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯಕ್ಕೆ ಮತ್ತು ಊಟಕ್ಕೆ ವ್ಯವಸ್ಥೆ ಕಲ್ಪಿಸಿ ಮಕ್ಕಳ ಚಿಕಿತ್ಸೆ ಬಗ್ಗೆ ನೋಡಿಕೊಂಡಿದ್ದಾರೆ., ಇದರ ಹೊರತಾಗಿ ಮುಳುಬಾಗಿಲು ಕ್ಷೇತ್ರದ ಶಾಸಕ ಮಂಜುನಾಥ ಆಗಮಿಸಿ ವಿಧ್ಯಾರ್ಥಿಗಳನ್ನ ತಬ್ಬಿಕೊಂಡು ಕಣ್ಣೀರು ಹಾಕಿದರು, ಈ ಘಟನೆಗೆ ಪ್ರವಾಸೋದ್ಯಮ ಇಲಾಖೆಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ,ಸ್ನೇಹಿತರನ್ನ ಕಳೆದುಕೊಂಡ ಇನ್ನುಳಿದ ವಿದ್ಯಾರ್ಥಿಗಳು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಿರುವ ದೃಶ್ಯ ಕಲ್ಲು ಹೃದಯ ಕರಗಿಸುತ್ತಿತ್ತು.
ಭವಿಷ್ಯದಲ್ಲಿ ಹತ್ತಾರು ಕನಸು ಕಟ್ಟಿಕೊಂಡ ವಿಧ್ಯಾರ್ಥಿನಿಯರ ಕನಸು ಮುರುಡೇಶ್ವರನ ಬುಡದಲ್ಲಿ ನುಚ್ಚುನೂರಾಗಿದೆ.ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಳ್ಳಬೇಕಾಗಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು.ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು.ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ.
ಗಮನಿಸಿ