ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ತಾಲೂಕಿನ ತೋಡೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಸಂಜೆ ಜಾನುವಾರೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಗೋವಾ ರಾಜ್ಯದ ವಾಸ್ಕೋ ಮೂಲದ ಆಯೀಶ ಅನಂತ ಗಡೇಕರ ಅಪಘಾತಕ್ಕೀಡಾದ ಬೈಕ ಸವಾರ. ಇವರು ಅಂಕೋಲಾ ಕಡೆಯಿಂದ ಕಾರವಾರದ ಕಡೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ.ತೋಡೂರು ಬಳಿ ಹೆದ್ದಾರಿಯಲ್ಲಿ ಜಾನುವಾರು ಅಡ್ಡ ಬಂದಿದ್ದು ಬೈಕ್ ನಿಯಂತ್ರಿಸಲಾಗದೇ ಡಿಕ್ಕಿ ಹೊಡೆದಿದ್ದಾನೆ.ಇದರಿಂದಾಗಿ ಬೈಕ್ ಸಾಕಷ್ಟು ದೂರ ಜರಿದುಕೊಂಡು ಹೋಗಿದೆ. ಬೈಕಿನಲ್ಲಿ ಸಾಕಷ್ಟು ಪೆಟ್ರೋಲ್ ಇದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ.
ಘಟನೆಯಲ್ಲಿ ಸವಾರ ಬಚಾವಾವಿದ್ದು ಬೈಕ್ ಹೊತ್ತಿ ಉರಿದಿದೆ. ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಗಮನಿಸಿ
- ಮೂರು ವರ್ಷದಲ್ಲೇ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಮಂಕಾಳ್ ವೈದ್ಯ
- ಮೊರಬಾದಲ್ಲಿ ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಜಖಂ: ಪ್ರಾಣಾಪಾಯದಿಂದ ಪಾರು
- ಕರಾವಳಿಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ಡಿಕೆಶಿ ಸಚಿವ ಸಂಪುಟದಲ್ಲಿ ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ..!
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ

