ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ತಾಲೂಕಿನ ತೋಡೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಸಂಜೆ ಜಾನುವಾರೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಗೋವಾ ರಾಜ್ಯದ ವಾಸ್ಕೋ ಮೂಲದ ಆಯೀಶ ಅನಂತ ಗಡೇಕರ ಅಪಘಾತಕ್ಕೀಡಾದ ಬೈಕ ಸವಾರ. ಇವರು ಅಂಕೋಲಾ ಕಡೆಯಿಂದ ಕಾರವಾರದ ಕಡೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ.ತೋಡೂರು ಬಳಿ ಹೆದ್ದಾರಿಯಲ್ಲಿ ಜಾನುವಾರು ಅಡ್ಡ ಬಂದಿದ್ದು ಬೈಕ್ ನಿಯಂತ್ರಿಸಲಾಗದೇ ಡಿಕ್ಕಿ ಹೊಡೆದಿದ್ದಾನೆ.ಇದರಿಂದಾಗಿ ಬೈಕ್ ಸಾಕಷ್ಟು ದೂರ ಜರಿದುಕೊಂಡು ಹೋಗಿದೆ. ಬೈಕಿನಲ್ಲಿ ಸಾಕಷ್ಟು ಪೆಟ್ರೋಲ್ ಇದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ.
ಘಟನೆಯಲ್ಲಿ ಸವಾರ ಬಚಾವಾವಿದ್ದು ಬೈಕ್ ಹೊತ್ತಿ ಉರಿದಿದೆ. ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಗಮನಿಸಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

