ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ತಾಲ್ಲೂಕಿನ ಬಿಣಗಾದ ಗ್ರಾಸಿಮ್ ಇಂಡಸ್ಟ್ರಿಯಲ್ಲಿ(Grasim Industries) ಅನುಮಾನಾಸ್ಪದವಾಗಿ ಕಾರ್ಮಿಕ ನೊರ್ವ ಸಾವನ್ನಪ್ಪಿದ್ದಾನೆ.
ಬೈತಖೋಲ ಮೂಲದ ನಾಗರಾಜ ವಿಷ್ಣು ಅವರ್ಸೇಕರ್(41) ಮೃತ ದುರ್ದೈವಿಯಾಗಿದ್ದಾನೆ. ಇತ ಬಿಣಗಾದಲ್ಲಿರುವ ಗ್ರಾಸಿಮ್ ಇಂಡಸ್ಟ್ರಿಯಲ್ಲಿ ಕಾರ್ಮಿಕನಾಗಿದ್ದ, ಇನ್ನೂ ಯುವಕ ಸಾವನ್ನಪ್ಪಿರುವ ಬಗ್ಗೆ ಆತನ ಕುಟುಂಬಸ್ಥರು ಬಾಯರ್ನಲ್ಲಿ ಅನಿಲ ಸೋರಿಕೆ ಉಂಟಾಗಿ ಆತ ಸಾವನ್ನಪ್ಪಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
ಬಿಣಗಾದ ಸೋಲಾರಿಸ್ ಕೆಮಿಟೆಕ್ ಕಂಪೆನಿಯಲ್ಲಿ (Solaris Chemitech Company) ರಾತ್ರಿ ಪಾಳಿಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ರಾತ್ರಿ 11:30ರ ಸುಮಾರಿಗೆ ಬಾಯರ್ನಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದೆ ಎನ್ನಲಾಗಿದೆ. ಇದರಿಂದಾಗಿ ನಾಗರಾಜ ಮೃತಪಟ್ಟಿರಬಹುದೆಂದು ಹೇಳಲಾಗುತ್ತಿದೆ.ಉಳಿದ ಕಾರ್ಮಿಕರು ಸ್ಥಳದಿಂದ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.
ಕಾರವಾರ ಗ್ರಾಮೀಣ ಠಾಣೆಯಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದೂರು ದಾಖಲಾಗಿದೆ.
ಗಮನಿಸಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




