ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ :ಕೋಲಾರದಿಂದ ಉತ್ತರಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದಿ ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಳ್ಳಿ ತಿರುವಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕು ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢಶಾಲೆ ಮಾಸ್ತಿಹಳ್ಳಿ ಶಾಲಾ ಮಕ್ಕಳ ಖಾಸಗಿ ಪ್ರವಾಸ ವಾಹನವು ಜಿಲ್ಲಾ ಪ್ರವಾಸ ಮುಗಿಸಿಕೊಂಡು ಗೋಕರ್ಣದಿಂದ ಪುನಃ ಕೋಲಾರಕ್ಕೆ ಹೋಗುವಾಗ ರಾತ್ರಿ 12 ಗಂಟೆ ಸುಮಾರಿಗೆ ಎರಡು ವಾಹನಗಳ ಪೈಕಿ ಒಂದು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ವಾಹನದಲ್ಲಿ ಇದ್ದ 40ಶಾಲಾ ಮಕ್ಕಳ ಪೈಕಿ 34 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಶಿಕ್ಷಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣ ಹೊನ್ನಾವರದ ಸರಕಾರಿ ಆಸ್ಪತ್ರೆಗೆ ಪೊಲೀಸ್ ಮತ್ತು ಸ್ಥಳೀಯರ ಸಹಕಾರದೊಂದಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇನ್ನೂ ಗಂಭೀರವಾಗಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆನೆ ನಡೆದಿದೆ.
ಗಮನಿಸಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

