ಸುದ್ದಿಬಿಂದು ಬ್ಯೂರೋ ವರದಿ
ಸಿದ್ದಾಪುರ:ಎಕ್ಸೆಲ್ ತುಂಡಾದ ಪರಿಣಾಮ ಕೆಎಸ್ಆರ್ಟಿಸಿ ಬಸ್ಸೊಂದು ಗದ್ದೆಗೆ ನುಗ್ಗಿದ ಘಟನೆ ತಾಲೂಕಿನ ಬಳ್ಳಟ್ಟೆ ಗ್ರಾಮದ ಬಳಿ ನಡೆದಿದೆ.
ಶಿರಸಿಯಿಂದ ಹರೀಶಿ,ಚಂದ್ರಗುತ್ತಿ ಮಾರ್ಗವಾಗಿ ಬಸ್ಸು ಸಿದ್ದಾಪುರಕ್ಕೆ ಆಗಮಿಸುತ್ತಿತ್ತು. ಬಸ್ನಲ್ಲಿ 60ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು, ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಹ ಇದ್ದರು. ಬಳ್ಳಟ್ಟೆ ಗ್ರಾಮದ ಬಳಿ ಆಗಮಿಸುತ್ತಿದ್ದ ವೇಳೆ ಏಕಾಏಕಿ ಎಕ್ಸೆಲ್ ತುಂಡಾಗಿ ಬಸ್ಸು ರಸ್ತೆ ಪಕ್ಕದ ಗದ್ದೆಗೆ ನುಗ್ಗಿ ಅಡ್ಡಾಗಿ ನಿಂತಿದೆ.
ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲವಾಗಿದ್ದು, ಕೆಎಸ್ಆರ್ಟಿಸಿ ಬಸ್ ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರಿಗೆ ವ್ಯವಸ್ಥೆಗೆ ಆಕ್ರೋಶ
ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳು ಕೆಟ್ಟು ರಸ್ತೆ ಮಧ್ಯೆ ನಿಲ್ಲುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ, ಬಸ್ ಕೆಟ್ಟು ನಿಲ್ಲುವುದಕ್ಕೆ ಡಿಸಿ ಮತ್ತು ಡಿಪೋ ವ್ಯವಸ್ಥಾಪಕರ ನಿರ್ಲಕ್ಷವೇ ಕಾರಣವಾಗಿದ್ದು, ಇದು ಇಲ್ಲಿಗೆ ನಿಲ್ಲಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಗಮನಿಸಿ
- ಠಾಣೆ ಸಮೀಪವೇ ಓಸಿ-ಮಟ್ಕಾ ಆರೋಪ : ಒಂದು ಕಡೆ ದಾಳಿ, ಮತ್ತೊಂದೆಡೆ ‘ಡಿಜಿಟಲ್’ ದಂಧೆ ಜೋರು..?
- ಅಂಬೇವಾಡಿಯೇ ಚಿರತೆಯ ಅಡ್ಡಾ! ಹೋಮ್ಸ್ಟೇ ಬಳಿ ಮತ್ತೆ ಪ್ರತ್ಯಕ್ಷ
- ಅಘನಾಶಿನಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಮತಾ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
- 30 ನಿಮಿಷದಲ್ಲೇ 42 ಗ್ರಾಂ ಚಿನ್ನದ ಮಾಂಗಲ್ಯ ಸರ ಪತ್ತೆ : ಕುಮಟಾ ಪೊಲೀಸರ ಮಿಂಚಿನ ಕಾರ್ಯಚರಣೆ

