ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ನಗರದ ಗಾಂಧಿನಗರದ ಖಂಜರಭಾಟ್ ಪ್ರದೇಶದಲ್ಲಿ ವಿವಾಹಿತ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ನಿನ್ನೆ ಸಂಜೆ ನಡೆದಿದೆ.
ಖಂಜರಬಾಟ್ ನಿವಾಸಿ ಲಖನ್ ರಾಮು ಖಂಜರಬಾಟ್ (29) ಎಂಬಾತನೇ ನೇಣಿಗೆ ಶರಣಾದ ವಿವಾಹಿತ ವ್ಯಕ್ತಿಯಾಗಿದ್ದಾನೆ. ಈತ ಯಾವುದೋ ವಿಷಯವನ್ನು ಮನಸ್ಸಿಗೆ ಹೆಚ್ಚಿಕೊಂಡು, ಮನೆಯಲ್ಲಿ ಯಾರು ಇಲ್ಲದಿದ್ದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ತಕ್ಷಣವೇ ಈತನ ಸಂಬಂಧಿಕರು ಹಾಗೂ ಸ್ಥಳೀಯರು ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ..
ಗಮನಿಸಿ
- ಡಿಜೆ ಬಳಕೆಗೆ ಸಂಪೂರ್ಣ ನಿಷೇಧ : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ
- ಸಾಮಾಜಿಕ ಜಾಲತಾಣದಲ್ಲಿ ‘ರೇಟ್ರೋ ಜಾದು’ ಕ್ರೇಜ್; 80ರ ದಶಕಕ್ಕೆ ಮರಳುತ್ತಿದೆ ನೆಟ್ಟಿಗರು!
- ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನ್ಯಾಯವಾದಿ ಜಿ ಟಿ ನಾಯ್ಕ ನೇಮಕ
- ಕಾಂಗ್ರೆಸ್ ಸರ್ಕಾರದ ವಿರುದ್ದ ರೂಪಾಲಿ ನಾಯ್ಕ ವಾಗ್ದಾಳಿ ಬಳ್ಳಾರಿ ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿ

