ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಇಂದು ರಾತ್ರಿ ಸಿನಿಮೀಯ ರೀತಿಯಲ್ಲಿ ಉದ್ಯಮಿ ಓರ್ವನ್ನ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿರುವ ಘಟನೆ ನಡೆದಿದೆ.
ಮುಂಡಗೋಡು ಪಟ್ಟಣದ ಜಮೀರ ಅಹ್ಮದ್ ದರ್ಗಾವಾಲೆ ಎಂಬವರು ಅಪಹರಣಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಅವರು ತಮ್ಮ ಸ್ನೇಹಿತನೊಂದಿಗೆ ಪಟ್ಟಣದ ಮಾದರಿ ಶಾಲೆಯ ಎದುರುಗಡೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ, ಹಿಂದಿನಿಂದ ಬಂದು ಬಿಳಿ ಕಾರಿನಲ್ಲಿ ಬಂದವರು ಅವರಿಗೆ ಢಿಕ್ಕಿ ಹೊಡೆದಿದ್ದಾರೆನ್ನಲಾಗಿದ್ದು. ಈ ವೇಲೆ ಉದ್ಯಮಿ ಜಮೀರ್ ಅಹ್ಮದ್ ನೆಲಕ್ಕುರುಳಿ ಬಿದ್ದಾಗ, ಆವರ ಮೇಲೆ ಹಲ್ಲೆ ಮಾಡಿ ಚಾಕು ತೋರಿಸಿ ಬೆದರಿಸಿ ಅಪಹರಿಸಿಕೊಂಡು ಹೋಗಿದ್ದಾರೆ.
ಅಪಹರಣಕ್ಕೊಳಗಾದ ಜಮೀರ ಅಹ್ಮದ್ ದರ್ಗಾವಾಲೆ ಬಡ್ಡಿ ವ್ಯವಹಾರ ಹಾಗೂ ಸಣ್ಣ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್ನಲ್ಲೂ ತೊಡಗಿಸಿಕೊಂಡಿದ್ದರೆಂದು ತಿಳಿದುಬಂದಿದೆ. ಅವರ ಅಪಹಣದ ಬಗ್ಗೆ ಇದುವರೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದ್ಲ. ಅಪಹರಣಕ್ಕೆ ಭಾಗಿಯಾಗಿರುವವರು ಹಾವೇರಿಯವರಾಗಿರಬಹುದು ಎಂದು ಊಹಿಸಲಾಗಿದೆ. ಪೊಲೀಸರು ವಾಹನವನ್ನು ಪತ್ತೆಹಚ್ಚಿ ತನಿಖೆ ಪ್ರಾರಂಭಿಸಿದ್ದಾರೆ.
ಈ ಘಟನೆ ಸಂಬಂಧ ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಗಮನಿಸಿ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ

