ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೆಬಲ್ ನಿತ್ಯಾನಂದ ಕಿಂಡಲ್ಕರ್ ಮಂಗಳವಾರ ಹೃದಯಾಘಾತದಿಂದ ನಿಧನರಾದರು.

ಸೋಮವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು. ಮೂಲತಃ ಅವರು ಕಾರವಾರ ತಾಲೂಕಿನ ಕಿನ್ನಾರಾ ಗ್ರಾಮಕ್ಕೆ ಸೇರಿದವರಾಗಿದ್ದು, ಕಳೆದ 2 ವರ್ಷಗಳಿಂದ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು.

ಅಂಕೋಲಾ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್ಐ ಉಡ್ಡಪ್ಪ ಮತ್ತು ಸಿಬ್ಬಂದಿ ನಿತ್ಯಾನಂದ ಕಿಂಡಲ್ಕರ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಮನಿಸಿ