ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ಗರ್ಭದ ಗೋ ಹತ್ಯೆ ಪ್ರಕರಣಲ್ಲಿ ಪೊಲೀಸ್ ಬಂಧನಕ್ಕೆ ಒಳಗಾಗಿದ್ದ ಆರೋಪಿಯನ್ನ ಪಂಚನಾಮೆಗೆ ಕರೆದು ಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಹೊನ್ನಾವರದ ಕಾಸರಗೋಡ ಬಳಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನ ಹೊನ್ನಾವರ ಪೊಲೀಸರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಇದೆ ವೇಳೆ ಆರೋಪಿಯನ್ನ ಸ್ಥಳ ಪಂಚನಾಮೆಗಾಗಿ ಕರೆದಿಕೊಂಡು ಹೋಗಿದ್ದ ವೇಳೆ ಆತ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಆತನ ಕಾಲಿಗೆ ಫೈರಿಂಗ್ ಮಾಡಿದ್ದು, ಗಾಯಗೊಂಡ ಆರೋಪಿಯನ್ನ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ