Suddibindu. Digital News ಚೆನ್ನೈ:ರಸ್ತೆ ನಿರ್ಮಾಣಕ್ಕಾಗಿ ಟ್ರಕ್ನಲ್ಲಿ ಸಿಲೆಂಡರ್ ಸಾಗಿಸುತ್ತಿದ್ದ ವೇಳೆ ಹೆದ್ದಾರಿಯಲ್ಲೇ ಸಿಲಿಂಡರ್ ಸ್ಪೋಟಗೊಂಡು ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಮಿಳುನಾಡಿನ ಸೇಲಂ ರಸ್ತೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಚಿನ್ನಪ್ಪಂಪಟ್ಟಿ ಪ್ರದೇಶದಲ್ಲಿ ನಾಲ್ಕು ಲೇನ್ ಹೆದ್ದಾರಿ ಕಾಮಗಾರಿ ನಡೆಯುತ್ತಿತ್ತು. ಈ ಸಮಯದಲ್ಲಿ, ಸಿಲಿಂಡರ್ ಬಳಸಿ ರಸ್ತೆಗೆ ವೈಟ್ ಲೈನ್ ಹಾಕುವಾಗ ಸಿಲಿಂಡರ್ ಸ್ಫೋಟಗೊಂಡಿತು. ಈ ಘಟನೆಯ ವಿಡಿಯೋ ಕೂಡ ಲಭ್ಯವಾಗಿದೆ. ಅದರಲ್ಲಿ ಟ್ರಕ್ನಲ್ಲಿ ಸಣ್ಣ ಬೆಂಕಿ ಕಾಣಿಸಿಕೊಂಡಿರುವುದು ದೃಶ್ಯಗೋಚರವಾಗಿದೆ.
ಈ ಸಮಯದಲ್ಲಿ ಅಲ್ಲಿದ್ದ ಒಬ್ಬ ವ್ಯಕ್ತಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಆದರೆ ಕೆಲ ಸೆಕೆಂಡುಗಳಲ್ಲೇ ಸಿಲಿಂಡರ್ ಸ್ಫೋಟಗೊಂಡಿತು. ಸ್ಫೋಟದ ತೀವ್ರತೆಯಿಂದ ಸಂಪೂರ್ಣ ಟ್ರಕ್ ಜಖಂಗೊಂಡಿತು. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




