ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಎಲ್ಲರೂ ನಿರ್ಲಕ್ಷಸುತ್ತಿದ್ದ ಮಧ್ಯಮ ವರ್ಗದವರಿಗೆ ಭರ್ಜರಿ ಕೊಡುಗೆಗಳನ್ನು ನೀಡುವ ಮೂಲ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಜನರ ಪಾಲಿನ ಅಚ್ಚು ಮೆಚ್ಚಿನ ಬಜೆಟ್ ಆಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೀನುಗಾರಿಕೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿ, ಮೀನುಗಾರಿಕೆ ಕ್ಷೇತ್ರಕ್ಕೆ ೬೦ ಸಾವಿರ ಕೋಟಿ ರು. ಮೀಸಲಿಡಲಾಗಿರುವುದ ಸಂತಸದ ವಿಷಯವಾಗಿದೆ.
ಕ್ಯಾನ್ಸರ್ ಸೇರಿದಂತೆ ಅಗತ್ಯ 32 ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು, ಗ್ರಾಮೀಣ ಅಭಿವೃದ್ಧಿಗೆ ಅತಿ ಹೆಚ್ಚಿನ ಅನುದಾನ ಮೀಸಲಿಟ್ಟಿರುವುದು, ಬಡವರು, ದುರ್ಲ ವರ್ಗಗಳ ಏಳಿಗೆಗೆ ಯೋಜನೆಗಳನ್ನು ಘೋಷಿಸಿರುವುದು ಅಭಿನಂದನೀಯ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಸ್ ಪರಿಕಲ್ಪನೆಯ ಆಡಳಿತ ನೀಡುವ ಪರಿಪೂರ್ಣ ಬಜೆಟ್ ಎನ್ನಲು ಯಾವುದೇ ಅಡ್ಡಿ ಇಲ್ಲ. ದೇಶದ ಸರ್ವಾಂಗೀಣ ಪ್ರಗತಿ ಗಮನದಲ್ಲಿರಿಸಿಕೊಂಡು, ಯಶಸ್ವಿ ಬಜೆಟ್ ಮಂಡಿಸಿದ ಕೇಂದ್ರ ಸರ್ಕಾರಕ್ಕೆ, ಕೇಂದ್ರ ವಿತ್ತ ಸಚಿವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ.
ಇದನ್ನೂ ಓದಿ