ಸುದ್ದಿಬಿಂದು ಬ್ಯೂರೋ‌ ವರದಿ
ಕಾರವಾರ : ಜಾನಪದ ಗಾನಕೋಗಿಲೆ’ ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮು ಗೌಡ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಅವರು ಸಂತಾಪ ಸೂಚಿಸಿದ್ದಾರೆ.

ಸುಕ್ರಿ ಗೌಡ ಅವರು ಇಂದು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ದುಃಖ ಉಂಟಾಗಿದೆ. ಹಾಲಕ್ಕಿ ಸಮಾಜದಲ್ಲಿ ಹುಟ್ಟಿದ್ದ ಸುಕ್ರಜ್ಜಿ ಅವರು ತಮ್ಮ ಜಾನಪದ ಹಾಡುಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದ್ದಾರೆ. ಅವರು ನಮ್ಮ ಜಿಲ್ಲೆಯಲ್ಲಿ ನಡೆದ ಅನೇಕ ಹೋರಾಟದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿರುವುದನ್ನ ನೋಡಿದ್ದೇನೆ. ಅವರ ನಿಧನ ನಮ್ಮ‌ ಜಿಲ್ಲೆಗೆ ಅಷ್ಟೆ ಅಲ್ಲದೆ ರಾಜ್ಯಕ್ಕೂ ಸಹ ತುಂಬಲಾರದ ನಷ್ಟವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿದ ಇವರು ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ನಾವೇಲ್ಲಾ ಇಂದು ಕಳೆದುಕೊಂಡಿರುವುದು ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುವುದರೊಂದಿಗೆ ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಮಂಕಾಳ್ ವೈದ್ಯ ದೇವರಲ್ಲಿ ಪ್ರಾರ್ಥಿಸಿದ್ದಾರೆ.