ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಗಾಯಕಿ ಹೋರಾಟಗಾರ್ತಿ ಸುಕ್ರಿ ಬೊಮ್ಮ ಗೌಡ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಸ್ಥಳೀಯ ಶಾಸಕ ಸತೀಶ್ ಸೈಲ್ ಪ್ರಾರ್ಥಿಸಿದ್ದಾಸಿ,ಸಂತಾಪ ಸೂಚಿಸಿದ್ದಾರೆ.
ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು.ಜಾನಪದಶ್ರೀ, ನಾಡೋಜ ಪ್ರಶಸ್ತಿಗೆ ಕೂಡ ಅವರು ಭಾಜನರಾಗಿದ್ದರು.ಸುಕ್ರಿ ಗೌಡ ಅವರ ಅಗಲುವಿಕೆಯಿಂದ ಜನಪದ ಸಂಸ್ಕೃತಿ ಸಂರಕ್ಷಕಿಯಾಗಿದ್ದ,ಅದಮ್ಯ ಚೇತನವನ್ನು ನಾಡು ಕಳೆದುಕೊಂಡಂತಾಗಿದೆ.
ಸುಕ್ರಿ ಗೌಡರ ಅಗಲುವಿಕೆಯಿಂದ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಬಂಧುಗಳಿಗೆ ಹಾಗೂ ಸಮುದಾಯದವರಿಗೆ ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಮತ್ತು ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾರವಾರ ಶಾಸಕ ಸತೀಶ್ ಸೈಲ್ ತಿಳಿಸಿದ್ದಾರೆ.
ಇದನ್ನೂ ಓದಿ
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ

