ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಬೆಂಗಳೂರು ದಕ್ಷಿಣ ಪೂರ್ವ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ACP) ಗೋವರ್ಧನ್ ಮತ್ತು ಸದ್ಯ ಉತ್ತರಕನ್ನಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿ ಒಬ್ಬರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ACPಗೋವರ್ಧನ್ ಅವರ ಪತ್ನಿ ತಮ್ಮ ಪತಿಯ ವಿರುದ್ಧ ಹಾಗೂ ಮತ್ತೊಬ್ಬ ಮಹಿಳಾ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ. ಗೋವರ್ಧನ್ ಅವರು ಡಿವೈಎಸ್ಪಿ (DySP)ನೇಮಕಗೊಂಡ ನಂತರದಿಂದ ತಮ್ಮ ಕುಟುಂಬದಿಂದ ದೂರವಾಗಿದ್ದರು. ಅವರು ತಮ್ಮದೇ ಬ್ಯಾಚ್ನ ಮಹಿಳಾ ಅಧಿಕಾರಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಪತಿಯನ್ನ ಪ್ರಶ್ನಿಸಿದ್ದಕ್ಕೆ ತನ್ನನ್ನು ಹಲ್ಲೆ ಮಾಡಿ ಕೊಲ್ಲಲು ಪ್ರಯತ್ನಿಸಿದರು ಎಂದು ಪತ್ನಿ ಅಮೃತಾ ದೂರು ನೀಡಿದ್ದಾರೆ.
ಆ ಮಹಿಳಾ ಅಧಿಕಾರಿ ಮತ್ತು ACP ಗೋವರ್ಧನ್ ನಡುವಿನ ಚಾಟ್ಗಳೂ ಪತ್ತೆಯಾಗಿವೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಪ್ರಕರಣ ಸಂಬಂಧ ಇದೀಗ ರಾಜ್ಯಮಟ್ಟದ ಮಾಧ್ಯಮಗಳಲ್ಲಿಯೂ ದೊಡ್ಡ ಮಟ್ಟದ ಸುದ್ದಿಯಾಗುತ್ತಿವೆ..
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ


