ಸುದ್ದಿಬಿಂದು ಬ್ಯೂರೋ ವರದಿ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ 2025 ರ ಮಹಾಕುಂಭ ಮೇಳಕ್ಕೆ ಕುಟುಂಬ ಸಮೇತರಾಗಿ ತೆರಳಿದ  ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಅವರು ಪತ್ನಿ ಪುಷ್ಪಲತಾ ವೈದ್ಯ, ಮಗಳು ಬೀನಾ ವೈದ್ಯ ಜೊತೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡ‌ ಸಚಿವ ಮಂಕಾಳ್ ವೈದ್ಯ ಅವರು, ಉಜಿರೆಯ ಶ್ರೀರಾಮ ಕ್ಷೇತ್ರದ ಪಿಠಾಧೀಶ, ನಾಮಧಾರಿ ಕುಲಗುರುಗಳಾದ  ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿರು.144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ನನ್ನ ಜೀವನದಲ್ಲಿ ಇದು ಪುಣ್ಯದ ಕ್ಷಣ, ನನ್ನ ಜಿಲ್ಲೆಯ ರಾಜ್ಯದ ಎಲ್ಲ ಜನರ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿಕೊಂಡಿರುವುದಾಗಿ ಹೇಳಿಕೊಂಡರು. 

ಇದನ್ನೂ ಓದಿ