ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ಅಂರ್ತಜಾತಿ ವಿವಾಹವಾಗಿದ್ದಾರೆ ಎನ್ನುವ ಕಾರಣಕ್ಕೆ ವಧುವಿನ ತಂದೆಯೆ ಮಗಳಿಗೆ ಹಾಗೂ ಅಳಿಯನಿಗೆ ಚಾಕು ಇರಿದು ಹಲ್ಲೆ ಮಾಡಿ ತಾನು ಸಹ ವಿಷ ಸೇವನೆ ಮಾಡಿಕೊಂಡಿರುವ ಘಟನೆ ಶಿರಸಿ ತಾಲೂಕಿನ ಬದನಗೋಡ ಪಂಚಾಯಿತಿ ವ್ಯಾಪ್ತಿಯ ರಂಗಾಪುರದಲ್ಲಿ ನಡೆದಿದೆ.
ಶಂಖರ ಕಮ್ಮಾರ ಹಲ್ಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಈತನ ಮಗಳು ಮನೋಜ ಕಮಾಟಿ ಎಂಬುವವರನ್ನ ವಿವಾಹವಾಗಿದ್ದಾರೆ ಎನ್ನಲಾಗಿದ್ದು, ಮಗಳು ಅಂರ್ತಜಾತಿ ಯುವಕನ್ನ ವಿವಾಹವಾಗಿದ್ದಾಳೆ ಎನ್ನವ ಕಾರಣಕ್ಕೆ ಆಕೆಯ ತಂದೆಯೇ ಮಗಳು ಹಾಗೂ ಅಳಿಯನಿಗೆ ಚಾಕು ಇರಿದು ಹಲ್ಲೆ ನಡೆಸಿದ್ದಾನೆ.
ಇನ್ನೂ ಹಲ್ಲೆ ನಡೆಸಿದ ಮಾವ ಹಲ್ಲೆ ನಡೆಸಿದ ಬಳಿಕ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿ ಆತನು ಸಹ ಅಳಿಯ ಮಗಳೊಂದಿಗೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಡಿವಾಯಸ್ಪಿ ಗಣೇಶ ಕೆ ಎಲ್ ಮಾರ್ಗದರ್ಶನದಲ್ಲಿ ಸಿಪಿಆಯ್ ಶಶಿಕಾಂತ ವರ್ಮಾ ಆಸ್ಪತ್ರೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




