ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ತಾಲೂಕಿನ ಬರ್ಗಿ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ವಿಜ್ಞಾನ ಶಿಕ್ಷಕ ಪಿ.ಎನ್.ನಾಯ್ಕ ಪ್ರತಿಜ್ಞಾ ವಿಧಿ ಬೋಧಿಸಿದರು.ಹಾಗೂ ರಾಮನ್ ಪರಿಣಾಮ, ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮಹತ್ವ ಮತ್ತು 2025 ರ ಥೀಮ್ ಕುರಿತು ವಿವರಿಸುತ್ತಾ ಸರ್ ಸಿ.ವಿ.ರಾಮನ್ ರವರು1928 ರ ಫೆಬ್ರವರಿ 28 ರಂದು ರಾಮನ್ ಪರಿಣಾಮವನ್ನು ಆವಿಷ್ಕಾರ ಮಾಡಿದ ದಿನ. ಇದರ ಪ್ರಯುಕ್ತ ಸರ್ ಸಿ.ವಿ.ರಾಮನ್ ರವರಿಗೆ ನೋಬೆಲ್ ಪ್ರಶಸ್ತಿ ಲಭಿಸಿದೆ. ಅವರು ಭೌತಶಾಸ್ತ್ರದಲ್ಲಿ ನೋಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ರಾಮನ್ ಪರಿಣಾಮದ ಆವಿಷ್ಕಾರದ ಪ್ರಯುಕ್ತ ಪ್ರತಿ ವರ್ಷ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಯುವ ಸಮುದಾಯದಲ್ಲಿ ವೈಜ್ಞಾನಿಕ ಚಿಂತನೆ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಮುಖ್ಯಾಧ್ಯಾಪಕರಾದ ಎಂ ಕೆ. ನಾಯ್ಕ ಮತ್ತು ಶಿಕ್ಷಕವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ